ಜಿಲ್ಲಾ ಸುದ್ದಿಉಪಯುಕ್ತ ಮಾಹಿತಿಗಳುಕ್ರೈಂ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿ
ಬೆಳ್ಳಿ ಆಭರಣ ಕಳವು: ವಾರದೊಳಗೆ ಪ್ರಕರಣ ಭೇದಿಸಿ ಐವರನ್ನು ಬಂಧಿಸಿದ ಕಿತ್ತೂರು ಪೊಲೀಸರು

ಕಿತ್ತೂರು: ಇಲ್ಲಿನ ಪ್ರಸಿದ್ಧ ಬಂಗಾರದ ಅಂಗಡಿಯೊಂದರಲ್ಲಿ ನಡೆದಿದ್ದ ಭಾರಿ ಕಳವು ಪ್ರಕರಣವನ್ನು ಕಿತ್ತೂರು ಠಾಣೆ ಪೊಲೀಸರು ಕೇವಲ ಒಂದೇ ವಾರದಲ್ಲಿ ಯಶಸ್ವಿಯಾಗಿ ಭೇದಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮೂಲದ ನಾಲ್ವರು ಹಾಗೂ ಮಧ್ಯಪ್ರದೇಶದ ಒಬ್ಬ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಲಾಗಿದೆ.
₹22 ಲಕ್ಷ ಮೌಲ್ಯದ ಬೆಳ್ಳಿ ವಶ:
ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದ್ದು, ಸುಮಾರು ₹22 ಲಕ್ಷ ಮೌಲ್ಯದ 7 ಕೆ.ಜಿ. ಬೆಳ್ಳಿಯ ಆಭರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಸವಾಲಾಗಿದ್ದ ಈ ಕಳವು ಪ್ರಕರಣವನ್ನು ಅತ್ಯಂತ ತ್ವರಿತವಾಗಿ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ತನಿಖಾ ತಂಡ ಹಾಗೂ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಕಾರ್ಯಕ್ಷಮತೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಕೆ. ರಾಮರಾಜನ್ ಅವರು ವಿಶೇಷ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.



