ರಾಜ್ಯ ಸುದ್ದಿಜಿಲ್ಲಾ ಸುದ್ದಿತಾಲೂಕುಸ್ಥಳೀಯ ಸುದ್ದಿಗಳು

ವಿಧಿಲಿಖಿತ: ಆರು ತಿಂಗಳ ಕಾಲ ಸಾವಿನೊಂದಿಗೆ ಹೋರಾಡಿ ಕೊನೆಯುಸಿರೆಳೆದ ಎಂಜಿನಿಯರಿಂಗ್ ವಿದ್ಯಾರ್ಥಿ

Share News

ಮೂಡಬಿದಿರೆ: ಕಳೆದ ವರ್ಷ ಕಾರ್ಕಳದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಭರವಸೆಯ ಯುವ ಎಂಜಿನಿಯರಿಂಗ್ ವಿದ್ಯಾರ್ಥಿ ಸಾತ್ವಿಕ್ ಕುಲಾಲ್ (21) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್ ಅಂಚನ್ ಹಾಗೂ ಜಯಂತಿ ಕುಲಾಲ್ ದಂಪತಿಯ ಪುತ್ರನಾಗಿರುವ ಸಾತ್ವಿಕ್, ಸಿವಿಲ್ ಎಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು. 2025ರ ಅಕ್ಟೋಬರ್ ತಿಂಗಳಲ್ಲಿ ಕಾರ್ಕಳದ ಬಳಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ನಡೆದ ಅಪಘಾತದಲ್ಲಿ ಸಾತ್ವಿಕ್ ಅವರ ತಲೆ ಮತ್ತು ದೇಹಕ್ಕೆ ತೀವ್ರತರವಾದ ಪೆಟ್ಟಾಗಿತ್ತು.

ಅಪಘಾತ ಸಂಭವಿಸಿದ ದಿನದಿಂದಲೂ ಸಾತ್ವಿಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದರು. ಕಳೆದ ಐದಾರು ತಿಂಗಳಿನಿಂದ ವೈದ್ಯರು ಸಾತ್ವಿಕ್ ಅವರ ಜೀವ ಉಳಿಸಲು ಹರಸಾಹಸ ಪಟ್ಟಿದ್ದರು. ಕುಟುಂಬಸ್ಥರು ಮತ್ತು ಸ್ನೇಹಿತರು ಸಾತ್ವಿಕ್ ಚೇತರಿಸಿಕೊಂಡು ಬರಲಿ ಎಂದು ಪ್ರಾರ್ಥಿಸುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರು ಶನಿವಾರ ವಿಧಿವಶರಾಗಿದ್ದಾರೆ.

ಪದವಿ ಶಿಕ್ಷಣದ ಅಂತಿಮ ಹಂತದಲ್ಲಿದ್ದ ಸಾತ್ವಿಕ್, ಶೀಘ್ರದಲ್ಲೇ ಎಂಜಿನಿಯರ್ ಆಗಿ ಕುಟುಂಬಕ್ಕೆ ಆಸರೆಯಾಗಬೇಕಿತ್ತು. ಅಪ್ಪ-ಅಮ್ಮನ ಕನಸಿನ ಗೋಪುರವಾಗಿದ್ದ ಮಗನ ಅಕಾಲಿಕ ಮರಣದಿಂದ ಇಡೀ ಪಡುಮಾರ್ನಾಡು ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ಮೃತರು ತಂದೆ, ತಾಯಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.


Share News

Related Articles

Leave a Reply

Your email address will not be published. Required fields are marked *

Back to top button
error: Content is protected !!