ಉಪಯುಕ್ತ ಮಾಹಿತಿಗಳುಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುರಾಜ್ಯ ಸುದ್ದಿ
ಮೈಸೂರು: ಕ್ರಿಮಿನಲ್ ಪ್ರಕರಣಗಳ ಸಮರ್ಪಕ ತನಿಖೆಗೆ ಪೊಲೀಸ್ ಅಧಿಕಾರಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

ಮೈಸೂರು: ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ತನಿಖಾಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಕ್ರಿಮಿನಲ್ ಪ್ರಕರಣಗಳ ತನಿಖಾ ವಿಧಾನ ಕುರಿತು ವಿಶೇಷ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಕಾರ್ಯಾಗಾರದಲ್ಲಿ ದಕ್ಷಿಣ ವಲಯದ ಐಜಿಪಿ ಡಾ. ಬೋರಲಿಂಗಯ್ಯ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾದ (SP) ಮಲ್ಲಿಕಾರ್ಜುನ ಬಾಲದಂಡಿ ಅವರು ಭಾಗವಹಿಸಿ, ತನಿಖಾ ಪ್ರಕ್ರಿಯೆಗಳ ಕುರಿತು ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಪರಿಣಾಮಕಾರಿ ತನಿಖೆಗೆ ಸೂಚನೆ:
ಕ್ರಿಮಿನಲ್ ಪ್ರಕರಣಗಳ ತನಿಖೆಯಲ್ಲಿ ಕಾನೂನುಬದ್ಧತೆ, ನಿಖರತೆ ಹಾಗೂ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ತರಬೇತಿ ನೀಡಲಾಯಿತು. ಕಾನೂನು ಪ್ರಕ್ರಿಯೆಗಳನ್ನು ಸರಿಯಾಗಿ ಪಾಲಿಸುವುದು ಮತ್ತು ಸಾಕ್ಷ್ಯಧಾರಗಳ ಸಮರ್ಪಕ ನಿರ್ವಹಣೆ ಕುರಿತು ನಿವೃತ್ತ ಸರ್ಕಾರಿ ಅಭಿಯೋಜಕರು ತಾಂತ್ರಿಕ ವಿವರಣೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಅಪರ ಪೊಲೀಸ್ ಅಧೀಕ್ಷಕರು ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.



